ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

Updated on:

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ. 21ರಂದು ಬಿಡುಗಡೆಗೊಳಿಸಿದರು.

ನಂತರ ಆಶೀರ್ವಾದಿಸಿದ ಸ್ವಾಮೀಜಿಯವರು ಸುದ್ದಿ “ಉದಯ ಪತ್ರಿಕೆ” ಚೆನ್ನಾಗಿ ಮೂಡಿ ಬಂದಿದೆ. ಪತ್ರಿಕೆಗೆ ತಾಲೂಕಿನ ಓದುಗರ ಪೂರ್ಣಬೆಂಬಲ ಹಾಗೂ ಪ್ರೋತ್ಸಾಹ ದೊರೆಯುತ್ತದೆ. ಪತ್ರಿಕೆಯಲ್ಲಿ ಉತ್ತಮ ವಿಚಾರಗಳು ಪ್ರಕಟಗೊಳ್ಳಬೇಕು. ಈ ಪತ್ರಿಕೆ ಉನ್ನತಿಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಪ್ರಧಾನ ಸಂಪಾದಕ ಬಿ.ಎಸ್ ಕುಲಾಲ್, ಮಾಲಕ ತುಕರಾಮ್ ಬಿ., ಸಹ ಸಂಪಾದಕ ಸಂತೋಷ್ ಪಿ. ಕೋಟ್ಯಾನ್, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಹೊಸಪಟ್ಣ, ಯುವ ಸಾಹಿತಿ ಚಂದ್ರಹಾಸ ಬಳಂಜ, ಕಚೇರಿ ಸಿಬ್ಬಂದಿ ಭವನೀಸ್ ಉಪಸ್ಥಿತರಿದ್ದರು.

Leave a Comment

error: Content is protected !!