25 C
ಪುತ್ತೂರು, ಬೆಳ್ತಂಗಡಿ
May 21, 2025
ತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆಯನ್ನು ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ. 21ರಂದು ಬಿಡುಗಡೆಗೊಳಿಸಿದರು.

ನಂತರ ಆಶೀರ್ವಾದಿಸಿದ ಸ್ವಾಮೀಜಿಯವರು ಸುದ್ದಿ “ಉದಯ ಪತ್ರಿಕೆ” ಚೆನ್ನಾಗಿ ಮೂಡಿ ಬಂದಿದೆ. ಪತ್ರಿಕೆಗೆ ತಾಲೂಕಿನ ಓದುಗರ ಪೂರ್ಣಬೆಂಬಲ ಹಾಗೂ ಪ್ರೋತ್ಸಾಹ ದೊರೆಯುತ್ತದೆ. ಪತ್ರಿಕೆಯಲ್ಲಿ ಉತ್ತಮ ವಿಚಾರಗಳು ಪ್ರಕಟಗೊಳ್ಳಬೇಕು. ಈ ಪತ್ರಿಕೆ ಉನ್ನತಿಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪತ್ರಿಕೆಯ ಪ್ರಧಾನ ಸಂಪಾದಕ ಬಿ.ಎಸ್ ಕುಲಾಲ್, ಮಾಲಕ ತುಕರಾಮ್ ಬಿ., ಸಹ ಸಂಪಾದಕ ಸಂತೋಷ್ ಪಿ. ಕೋಟ್ಯಾನ್, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಹೊಸಪಟ್ಣ, ಯುವ ಸಾಹಿತಿ ಚಂದ್ರಹಾಸ ಬಳಂಜ, ಕಚೇರಿ ಸಿಬ್ಬಂದಿ ಭವನೀಸ್ ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!