ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Leave a Comment

error: Content is protected !!