25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

  • ಗ್ರಾಹಕರಿಗೆ ಉತ್ತಮ ಸೇವೆ
    ಸಹಕಾರಿ ಸಂಘಗಳ ಅಭಿವೃದ್ಧಿಗೆ ಪೂರಕ : ಉದ್ಯಮಿ ಪ್ರೇಮ್ ಕುಮಾರ್
  • ಕೆರ್ವಾಶೆ, ಬೈಲೂರು ಸೇರಿದಂತೆ ವಿವಿಧ ಕಡೆ ಶಾಖೆ ತೆರೆಯುವ ಯೋಜನೆ: ನೇಮಿರಾಜ

ಕಾರ್ಕಳ : ಗ್ರಾಹಕರಿಗೆ ಉತ್ತಮ ಸೇವೆ
ನೀಡಿದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತದೆ. ಸಹಕಾರಿ ಸಂಘಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿ ದೊರೆಯುವುದರ ಜತೆಗೆ ಗ್ರಾಹಕರಿಗೆ ಕ್ಷಿಪ್ರ ಸೇವೆ ಲಭ್ಯವಾಗುತ್ತಿದೆ. ಆದುದರಿಂದ ಜನರು ವಾಣಿಜ್ಯ ಬ್ಯಾಂಕ್‌ ಗಳಿಗಿಂತ ಹೆಚ್ಚಾಗಿ ಸಹಕಾರಿ ಸಂಘಗಳನ್ನೇ ಅವಲಂಬಿಸುತ್ತಿದ್ದಾರೆ ಎಂದು ಹೊಸಾರು ಉದ್ಯಮಿ ಪ್ರೇಮ್ ಕುಮಾರ್ ಹೇಳಿದರು.

ದಾನಶಾಲೆ ಮಹಾವೀರ ಕಾಂಪ್ಲೆಕ್ಸ್‌ನಲ್ಲಿ ಕೇಂದ್ರ ಕಚೇರಿಯೊಂದಿಗೆ ಬೆಳ್ತಂಗಡಿ, ಉಜಿರೆ ಮತ್ತು ಬಳಂಜ ಸೇರಿದಂತೆ ಈಗಾಗಲೇ 4 ಶಾಖೆಗಳನ್ನು ಹೊಂದಿರುವ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯುತ ಇದರ 5ನೇ ಶಾಖೆಯನ್ನು ಹೊಸ್ಮಾರಿನ ಜಯ ಕಾಂಪ್ಲೆಕ್ಸ್‌ನಲ್ಲಿ ಮಾ. 20ರಂದು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ನಿರ್ದೇಶಕ ನೇಮಿರಾಜ ಆರಿಗ ಅವರು ಮಾತನಾಡಿ, ಗ್ರಾಹಕರ ಸಹಕಾರ ಮತ್ತು ಪ್ರೋತ್ಸಾಹದಿಂದಾಗಿ ಸಂಘದ 5ನೇ ಶಾಖೆ ಇಂದು ಆರಂಭವಾಗಿದೆ. ಮುಂದೆ ಕೆರ್ವಾಶೆ, ಬೈಲೂರು ಸೇರಿದಂತೆ ವಿವಿಧ ಕಡೆ ಶಾಖೆ ತೆರೆಯುವ ಉದ್ದೇಶವಿದೆ. ಶಾಖೆಗಳು ಹೆಚ್ಚಿದಂತೆ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು. ಕಾರ್ಕಳ ಕ್ಷೇತ್ರ ಬಿ.ಜೆ.ಪಿ. ಅಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಅನಿವಾರ್ಯತೆ ಮತ್ತು ತುರ್ತು ಸಂದರ್ಭದಲ್ಲಿ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಸಹಕಾರಿ ಬ್ಯಾಂಕ್‌ಗಳೇ ಹೆಚ್ಚಿನ ಉಪಯೋಗಕ್ಕೆ ಬರುತ್ತದೆ ಎಂದರು. ಈದು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಪೂಜಾರಿ, ನೆಲ್ಲಿಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯವರ್ಮ ಜೈನ್ ಮತ್ತು ಕಟ್ಟಡದ ಮಾಲಕ, ಹೊಸ್ಮಾರು ಜಯ ಕ್ಲಿನಿಕ್‌ನ ಡಾ| ಪ್ರಸಾದ್ ಬಿ. ಶೆಟ್ಟಿ ಅತಿಥಿಗಳಾಗಿ ಭಾಗವಸಿ ಶುಭಹಾರೈಸಿದರು.

ಸಂಘದ ಉಪಾಧ್ಯಕ್ಷ ಶಶಿಕಿರಣ್ ಜೈನ್ ಬೆಳ್ತಂಗಡಿ, ನಿರ್ದೇಶಕರಾದ ನಿರಂಜನ್ ಆದ್ರೆ ನಾರಾವಿ, ಪದ್ಮರಾಜ ಅತಿಕಾರಿ ತೆಳ್ಳಾರು, ಪ್ರವೀಣ್ ಭಟ್ ಕಾರ್ಕಳ, ನಿರಂಜನ್ ಜೈನ್ ಕಾರ್ಕಳ, ಎಸ್‌. ಪಾರ್ಶ್ವನಾಥ ವರ್ಮ ಕಾರ್ಕಳ, ಶಮಂತ್‌ ಕುಮಾರ್ ಜೈನ್‌ ಬೆಳ್ತಂಗಡಿ, ಪ್ರಶಾಂತ್ ಕುಮಾ‌ ಉಜಿರೆ, ಪದ್ಮಲತಾ ಧರ್ಮಸ್ಥಳ, ಭವ್ಯ ಜೈನ್ ಅಳದಂಗಡಿ ಮತ್ತು ಸುಜಾತಾ ಕಾರ್ಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹೊಸ್ಮಾರು ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಪ್ರವೀಣ್ ಭಟ್ ಸ್ವಾಗತಿಸಿದರು. ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶು ಕುಮಾರ್‌ ಜೈನ್‌ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!