25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya
error: Content is protected !!