September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ ಉಜಿರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಎಸ್‌ಎಮ್‌ಎ ಉಜಿರೆ ರೀಜಿನಲ್ ಅಧ್ಯಕ್ಷ ಮುಹ್ಯುದ್ದೀನ್ ವಹಿಸಿದ್ದರು. ರೇಂಜ್ ಕೋಶಾಧಿಕಾರಿ ಖಾಲಿದ್‌ ಮುಸ್ಲಿಯಾರ್ ಕುಂಟಿನಿ ಉದ್ಘಾಟಿಸಿದರು. ಎಸ್‌ಎಮ್‌ಎ ಕೋಶಾಧಿಕಾರಿ ಹನೀಫ್ ಮುಸ್ಲಿಯಾರ್ ಶುಭಾಶಯ ಕೋರಿದರು.
ಝೋನ್ ಅಧ್ಯಕ್ಷ ಹಮೀದ್ ನೆಕ್ಕರೆ ಮುಂಡಾಜೆ, ಎಸ್‌ಜೆಎಮ್ ರೇಂಜ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಕಬಕ, ಹೈದರ್ ಮದನಿ, ಇಬ್ರಾಹಿಂ ಅತ್ತಾಜೆ‌, ಯೂಸುಫ್ ಕುಂಟಿನಿ ಇವರು ವೇದಿಕೆಯಲ್ಲಿದ್ದರು.

ಉಜಿರೆ ರೀಜಿನಲ್ ವ್ಯಾಪ್ತಿಯ 19 ಮೊಹಲ್ಲಾಗಳ 42 ಮಂದಿಗೆ ಕಿಟ್ ಹಸ್ತಾಂತರಿಸಲಾಯಿತು.
ಎಸ್‌ಎಮ್‌ಎ ರೀಜನಲ್ ಪ್ರಧಾನ ಕಾರ್ಯದರ್ಶಿ
ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿ ಕಾರ್ಯಕ್ರಮ‌ ನಿರೂಪಿಸಿದರು.
ಅಶ್ರಫ್ ಹಿಮಮಿ ಧನ್ಯವಾದವಿತ್ತರು.

Related posts

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya
error: Content is protected !!