July 23, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya
error: Content is protected !!