22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಕಳೆದ 14 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಕೇಂದ್ರದಲ್ಲಿ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಮಲ್‌ಜ‌ಅ ದ‌ಅವಾ ಮತ್ತು ರಿಲೀಫ್ ಸೆಂಟರ್ ವತಿಯಿಂದ 1 ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರ ವಸ್ತುಗಳನ್ನೊಳಗೊಂಡ ಕಿಟ್ ವಿತರಣೆ ನಡೆಯಿತು.

ತಾಲೂಕು ಮತ್ತು ತಾಲೂಕಿನ ಗಡಿ ಪ್ರದೇಶದಲ್ಲಿ ಒಳಗೊಂಡಂತೆ ಒಟ್ಟು 11 ಕೇಂದ್ರಗಳಲ್ಲಿ ಫಲಾನುಭವಿಗಳನ್ನು ಸಂಯೋಜಿಸಿ ವಿತರಣೆ ನಡೆಸಲಾಯಿತು.

ಮುಂಡಾಜೆ ಕೇಂದ್ರದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕರ್ನಾಟಕ ಸೀರೋ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ ಪಿಆರ್‌ಒ ಸೆಬಾಸ್ಟಿಯನ್ ಪಿ.ಸಿ, ಶ್ರೀ ಶಾಸ್ಥಾ ವೆಲ್ ರಿಂಗ್ ವರ್ಕ್ಸ್ ಮಾಲಿಕ ಶಿಜು ಕೇರಳ, ಎಸ್‌ಎಮ್‌ಎ ಉಜಿರೆ ಝೋನ್ ಅಧ್ಯಕ್ಷ ಅಬ್ದುಲ್ ಹಮೀದ್ ನೆಕ್ಕರೆ ಮುಂಡಾಜೆ ಕಿಟ್ ಹಸ್ತಾಂತರಿಸಿದರು.
ಎಸ್‌ವೈಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಗೈದು ಸ್ವಾಗತಿಸಿದರು.
ಮುಂಡಾಜೆ, ಉಜಿರೆ, ಲಾಯಿಲ, ಬದ್ಯಾರ್,ಗುರುವಾಯನಕೆರೆ, ಮದ್ದಡ್ಕ, ಕಲ್ಲೇರಿ, ಸರಳಿಕಟ್ಟೆ, ನೆಲ್ಯಾಡಿ, ಉಪ್ಪಿನಂಗಡಿ, ಆತೂರು ಕೇಂದ್ರಗಳಲ್ಲಿ 110 ಕ್ಕೂ ಅಧಿಕ ಮೊಹಲ್ಲಾಗಳ ಅರ್ಹ ಕುಟುಂಬಗಳಿಗೆ ಎರಡು ದಿನಗಳಲ್ಲಿ ವಿತರಣೆಗಳು ನಡೆದವು.
ಮಲ್‌ಜ‌ಅ ಸಂಸ್ಥೆಯ ಪಿಆರ್‌ಒ ಶರೀಫ್ ಬೆರ್ಕಳ, ಕಾರ್ಯಕರ್ತರಾದ ರಝಾಕ್, ಸುಲೈಮಾನ್ ಕುಂಟಿನಿ, ಅಬೂಬಕ್ಕರ್ ಹಾಜಿ, ಮುಹಮ್ಮದ್ ಎಂ.ಹೆಚ್, ಹಕೀಂ ಮದನಿ ಬೆಳಾಲು, ರಫೀಕ್ ಮದನಿ, ಆಸಿಫ್ ಅಹ್‌ಸನಿ, ಅಶ್ರಫ್ ಸಖಾಫಿ, ನವಾಝ್ ಅಹ್‌ಸನಿ, ಇಲ್ಯಾಸ್ ಮತ್ತು ರಫೀಕ್ ಕುಪ್ಪೆಟ್ಟಿ,
ಹಾಗೂ ಇತರರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya
error: Content is protected !!