September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ.

ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಇತರ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಹಾಲ್, ಡೈನಿಂಗ್ ಹಾಲ್, ಶಾಸಕರಿಗೆ ಕೊಠಡಿ, 2 ವಿವಿಐಪಿ ಕೊಠಡಿ, 8 ವಿಐಪಿ ರೂಮ್ ಗಳು,ಆಡಳಿತ ಕಚೇರಿ,7 ಸಿಂಗಲ್ ರೂಮ್, ನಿರ್ವಾಕರಿಗೆ ಮನೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ನೀರಿನ ಸೌಕರ್ಯ,ಶೌಚಾಲಯ ಸೇರಿದಂತೆ ವಿವಿದ ಸೌಲಭ್ಯಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya
error: Content is protected !!