July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!