ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಕಾರ್ಯದರ್ಶಿ ಲಕ್ಷ್ಮಣ್ ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!