30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ.

ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಇತರ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಹಾಲ್, ಡೈನಿಂಗ್ ಹಾಲ್, ಶಾಸಕರಿಗೆ ಕೊಠಡಿ, 2 ವಿವಿಐಪಿ ಕೊಠಡಿ, 8 ವಿಐಪಿ ರೂಮ್ ಗಳು,ಆಡಳಿತ ಕಚೇರಿ,7 ಸಿಂಗಲ್ ರೂಮ್, ನಿರ್ವಾಕರಿಗೆ ಮನೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ನೀರಿನ ಸೌಕರ್ಯ,ಶೌಚಾಲಯ ಸೇರಿದಂತೆ ವಿವಿದ ಸೌಲಭ್ಯಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya
error: Content is protected !!