September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ.

ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಇತರ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಹಾಲ್, ಡೈನಿಂಗ್ ಹಾಲ್, ಶಾಸಕರಿಗೆ ಕೊಠಡಿ, 2 ವಿವಿಐಪಿ ಕೊಠಡಿ, 8 ವಿಐಪಿ ರೂಮ್ ಗಳು,ಆಡಳಿತ ಕಚೇರಿ,7 ಸಿಂಗಲ್ ರೂಮ್, ನಿರ್ವಾಕರಿಗೆ ಮನೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ನೀರಿನ ಸೌಕರ್ಯ,ಶೌಚಾಲಯ ಸೇರಿದಂತೆ ವಿವಿದ ಸೌಲಭ್ಯಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya
error: Content is protected !!