ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

Updated on:


ನಾವೂರು: ಗ್ರಾಮ ಪಂಚಾಯತ್ ನಾವೂರು ಇದರ ವತಿಯಿಂದ ಪಂಚಾಯತಿಯ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ ಮಾ.೨೫ರಂದು ಜರುಗಿತು.
ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಜಯಂತ ಕೋಟ್ಯಾನ್, ನಾವೂರು ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ನಾವೂರು ಗ್ರಾ.ಪಂ ಅಧ್ಯಕ್ಷ ಗಣೇಶ್ ಗೌಡ ವಹಿಸಿದ್ದರು.

, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸ.ಕಾ. ಅಭಿಯಂತರ ನಿತಿನ್ ಕುಮಾರ್, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರಿನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ, ನಾವೂರು ಮಸೀದಿಯ ಖತೀಬರಾದ ಹಮೀದ್ ಸಖಾಫಿ, ಇಂದಬೆಟ್ಟು ಚರ್ಚ್‌ನ ಧರ್ಮಗುರು ಫಾ. ಸ್ಟೀವನ್ ಡಿ ಸೋಜ, ನಾವೂರು ಬಾಲಯೇಸು ದೇವಾಲಯದ ಧರ್ಮಗುರು ಫಾ. ಜೋಜಿ ವಡಕೇವಿಟರ್, ನಾವೂರು ಗ್ರಾ.ಪಂ ಉಪಾಧ್ಯಕ್ಷ ಶ್ರೀಮತಿ ಸುನಂದ, ಜಿ.ಪಂ ಮಾಜಿ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ತಾ.ಪಂ ಮಾಜಿ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಮತಿ ಲಲಿತಾ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್

ಭಾಗವಹಿಸಿದ್ದರು. ಸದಸ್ಯರಾದ ಬಾಲಕೃಷ್ಣ, ಎಂ.ಕೆ ಹಸೈನಾರ್, ಶ್ರೀಮತಿ ಶಾಂತಿ, ಶ್ರೀಮತಿ ಪ್ರಿಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣ ರಾಜ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಸಿಬ್ಬಂದಿಗಳಾದ ರಶ್ಮಿ, ಪ್ರಪುಲ್ಲ, ವನಜ, ನಾರಾಯಣ, ಶರೀಫ್, ಸೇಸಪ್ಪ ನಾಯ್ಕ ಉಪಸ್ಥಿತರಿದ್ದರು.

Leave a Comment

error: Content is protected !!