September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ.

ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಇತರ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಹಾಲ್, ಡೈನಿಂಗ್ ಹಾಲ್, ಶಾಸಕರಿಗೆ ಕೊಠಡಿ, 2 ವಿವಿಐಪಿ ಕೊಠಡಿ, 8 ವಿಐಪಿ ರೂಮ್ ಗಳು,ಆಡಳಿತ ಕಚೇರಿ,7 ಸಿಂಗಲ್ ರೂಮ್, ನಿರ್ವಾಕರಿಗೆ ಮನೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ನೀರಿನ ಸೌಕರ್ಯ,ಶೌಚಾಲಯ ಸೇರಿದಂತೆ ವಿವಿದ ಸೌಲಭ್ಯಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
error: Content is protected !!