July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಲಿದೆ.

ನೂತನ ನಿರೀಕ್ಷಣಾ ಮಂದಿರವನ್ನು ಜಿಲ್ಲಾ ಉಸ್ತುವಾರಿ ಸಚಿವ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ಸುನೀಲ್ ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ನಳಿನ್ ಕುಮಾರ್ ಕಟೀಲು,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್,ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಹಾಗೂ ಇತರ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರವಾಸಿ ಮಂದಿರದಲ್ಲಿ ಮೀಟಿಂಗ್ ಹಾಲ್, ಡೈನಿಂಗ್ ಹಾಲ್, ಶಾಸಕರಿಗೆ ಕೊಠಡಿ, 2 ವಿವಿಐಪಿ ಕೊಠಡಿ, 8 ವಿಐಪಿ ರೂಮ್ ಗಳು,ಆಡಳಿತ ಕಚೇರಿ,7 ಸಿಂಗಲ್ ರೂಮ್, ನಿರ್ವಾಕರಿಗೆ ಮನೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ನೀರಿನ ಸೌಕರ್ಯ,ಶೌಚಾಲಯ ಸೇರಿದಂತೆ ವಿವಿದ ಸೌಲಭ್ಯಗಳು ಲಭ್ಯವಿದೆ ಎಂದು ತಿಳಿಸಿದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya
error: Content is protected !!