25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಹೆಸರು ಅಂತಿಮಗೊಂಡಿದ್ದು, ಪ್ರಥಮ ಪಟ್ಟಿಯಲ್ಲಿ ಘೋಷಣೆಯಾಗಿದೆ.


ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಆಗಿ ಆಯ್ಕೆಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ರಕ್ಷಿತ್ ಶಿವರಾಂ ಅವರ ಹೆಸರಿದ್ದು, ಯಾರು ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ ಎಂಬ ಕುತೂಹಲ ಕಳೆದ ಕೆಲ ದಿನಗಳಿಂದ ಕಾರ್ಯಕರ್ತರಲ್ಲಿ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ.
ಮಾಜಿ ಪೊಲೀಸ್ ಅಧಿಕಾರಿಯಾಗಿರುವ ಬಿ.ಕೆ.ಶಿವರಾಮ್ ಅವರ ಪುತ್ರರಾಗಿರುವ ರಕ್ಷಿತ್ ಅವರು ಬೆಳ್ತಂಗಡಿ ಹೇರಾಜೆ ಮನೆತನದವರಾಗಿರುವ ನಿವೃತ್ತ ಎಸ್ಪಿಗಳಾದ ಪಿತಾಂಬರ ಹೇರಾಜೆ ಮತ್ತು ಮಿತ್ರ ಹೇರಾಜೆಯವರ ಕಿರಿಯ ಸಹೋದರಿ ಲತಾರವರ ಪುತ್ರ.

Related posts

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya
error: Content is protected !!