July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

ಕೊಕ್ಕಡ: ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜಾ ಹಕ್ಕನ್ನು ಹೊಂದಿರುವ ಶಿವಳ್ಳಿ ಬ್ರಾಹ್ಮಣ ಪಂಗಡಕ್ಕೆ ಸೇರಿದ ಶಬರಾಯ, ಯಡಪಡಿತ್ತಾಯ, ಉಪ್ಪಾರ್ಣ, ಮುಡಂಬಳಿತ್ತಾಯ, ಪಡ್ವೆಟ್ನಾಯ, ಅರಿಪಡಿತ್ತಾಯ, ತೋಡ್ತಿಲ್ಲಾಯ, ಅರಿಮಣಿತ್ತಾಯ ಈ ಕುಟುಂಬದ ಸದಸ್ಯರ ಸಭೆಯು ಇತ್ತೀಚೆಗೆ ಕೊಕ್ಕಡ ಸುಬ್ರಹ್ಮಣ್ಯ ಶಬರಾಯರ ವಾಸುಕೀ ನಿಲಯದಲ್ಲಿ ಜರುಗಿತು.
ದೇವಳದ ಪೂಜಾ ಕರ್ತವ್ಯವನ್ನು ಸುಲಭವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಶ್ರೀ ಪದ್ಮನಾಭ ಸ್ವಾಮಿ ಅಕ್ಷರದೇಶಿ ಸಮುದಾಯ ಸಂಘ ಎನ್ನುವ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾರ್ಯದರ್ಶಿ ಬೊಣ್ಯಸಾಗು ಸತೀಶ್ ಯಡಪಡಿತ್ತಾಯ, ಸಹಕಾರ್ಯದರ್ಶಿಯಾಗಿ ರವಿಪ್ರಸಾದ್ ಯಡಪಡಿತ್ತಾಯ, ಕೋಶಾಧಿಕಾರಿಯಾಗಿ ಲಕ್ಷ್ಮೀ ನಾರಾಯಣ ಉಪ್ಪಾರ್ಣ, ಮಾರ್ಗದರ್ಶಕರಾಗಿ ಸುರೇಶ ಶಬರಾಯ ಹುರುಳಿಮಜಲು, ಸುಬ್ರಹ್ಮಣ್ಯ ಶಬರಾಯ ಮರುವಂತಿಲ, ಪ್ರವೀಣ್ ಯಡಪಡಿತ್ತಾಯ, ಸದಸ್ಯರಾಗಿ ಸುಬ್ರಹ್ಮಣ್ಯ ಶಬರಾಯ ಗುಂಡಿಮಾರು, ಪ್ರಶಾಂತ್ ಶಬರಾಯ ಗುಂಡಿಮಾರು, ವಿಷ್ಣುಪ್ರಸಾದ್ ಶಬರಾಯ ಪುತ್ಯೆ, ಸುಕುಮಾರ್ ಯಡಪಡಿತ್ತಾಯ ಪಾಳಾಲೆ, ಲಕ್ಷ್ಮೀನಾರಾಯಣ ಶಬರಾಯ ಮುಂಡೂರು, ಡೆಂಜ ವೆಂಕಟರಮಣ ಉಪ್ಪಾರ್ಣ, ರವಿ ಶಬರಾಯ ಕನ್ಯಾಡಿ, ಪದ್ಮನಾಭ ಶಬರಾಯ ಪಟ್ರಮೆ, ಸತ್ಯನಾರಾಯಣ ತೋಡ್ತಿಲ್ಲಾಯ ಕೊಕ್ಕಡ, ಮಂಡೆಗುಂಡಿ, ರಾಧಾಕೃಷ್ಣ ಯಡಪಡಿತ್ತಾಯ, ಸೀತಾರಾಮ ಯಡಪಡಿತ್ತಾಯ ಆಯ್ಕೆಯಾದರು. ನೀಲೇಶ್ವರ ಆಲಂಬಾಡಿ ವಾಸುದೇವನ್ ಪಟ್ಟೇರಿ ತಂತ್ರಿಗಳು ಅಧ್ಯಕ್ಷತೆ ವಹಿಸಿದ್ದರು.

Related posts

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya
error: Content is protected !!