22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜಕೀಯ

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಾರಾವಿ ಮತ್ತು ಕುತ್ಲೂರು ಗ್ರಾಮದ ವಿಕಾಸ ಹಬ್ಬ ಮಾ.26 ರಂದು ನಾರಾವಿಯಲ್ಲಿ ನಡೆಯಿತು

.

ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶಾಸಕ ಹರೀಶ್ ಪೂಂಜರವರನ್ನು ತೆರೆದ ಜೀಪಿನಲ್ಲಿ ಮೆರಮಣಿಗೆಯ ಮೂಲಕ ಬರಮಾಡಿಕೊಂಡರು.

ಶಾಸಕ ಹರೀಶ್ ಪೂಂಜ ವಿಕಾಸ ಹಬ್ಬಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ದೇಶಭಕ್ತಿ ಸಾರುವ ಸಂಗೀತ ರಸಮಂಜರಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಎನ್.ಸುಧಾಕರ ಭಂಡಾರಿ,ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೋಕ್ತೇಸರ ಬಿ. ನಿರಂಜನ್ ಅಜ್ರಿ,ನಾರಾವಿ ಗ್ರಾ.ಪಂ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ,ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವಸಂತ ಭಟ್ ಮತ್ತು ಎನ್. ಶ್ರೀನಿವಾಸ ಕಿಣಿ,ಕುತ್ಲೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪಡಿವಾಳ್,ನಾರಾವಿ ಹಾ.ಉ.ಸ‌.ಸಂಘದ ಅಧ್ಯಕ್ಷ ಶೇಖರ ಹೆಗ್ಡೆ,ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷ ತುಂಗಪ್ಪ ಪೂಜಾರಿ,ಡಾ. ಪ್ರಸಾದ್ ಶೆಟ್ಟಿ ನಾರಾವಿ,ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಅರುಣ್ ಕ್ರಾಸ್ತ,ಅಜಿಜಿತ್ ಜೈನ್,ಸನತ್ ಕುಮಾರ್ ಹೆಗ್ಡೆ ನಾರಾವಿ,ರಾಮಚಂದ್ರ ಭಟ್ ಕುತ್ಲೂರು, ವಸಂತ ಆಚಾರ್ಯ, ಹಾಗೂ ಇತರರು ಉಪಸ್ಥಿತರಿದ್ದರು.

ನಾರಾವಿ ಹಾಗೂ ಕುತ್ಲೂರು ಗ್ರಾಮದಲ್ಲಿ ಶಾಸಕ ಹರೀಶ್ ಪೂಂಜರವರ ಅನುದಾನದಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಊರವರು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya
error: Content is protected !!