25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

ಪ್ರಾಣಾಪಾಯದಿಂದ ಪಾರಾದ ಆಶೋಕ್

ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದ
ಹಾವುಗಳ ಸಂ ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಇಂದು ಮನೆಯೊಂದರಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ಬಂದಿತ್ತು ಇದರ ರಕ್ಷಣೆಗೆ ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ ಎನ್ನಲಾಗುತ್ತಿದೆ.

ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Related posts

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya
error: Content is protected !!