July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆದಿದ್ದು ಇದರ ಅಂಗವಾಗಿ ದೇವರಿಗೆ ದೃಢಕಲಶಾಭಿಷೇಕವು ಮಾ26 ರಂದು ನಡೆಯಿತು.

48 ದಿನಗಳ ನಂತರ ನಡೆಯುವ ಈ ವಿಶೇಷ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ಭಜನೆ, ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಶಶಿಧರ ಡೋಂಗ್ರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪ್ರಧಾನ ಆರ್ಚಕ ಸೋಮನಾಥ ಮಯ್ಯ, ಕೋಶಾಧಿಕಾರಿ ಅನಿಲ್ ಕುಮಾರ್ ಮಾಳಿಗೆ ಮನೆ ಹಾಗೂ ವ್ಯವಸ್ಥಾಪನಾ, ಜೀರ್ಣೋದ್ಧಾರ,ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.

Related posts

ಬಂಟರ ಸಂಘ ಕಾವಳಕಟ್ಟೆ ವಲಯ : ಕಲಾಭಿನಂದನೆ – 2026 ಸಂಭ್ರಮಾಚರಣೆ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
error: Content is protected !!