July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಕೊಡಿಚ್ಚೂರು ಎಂಬಲ್ಲಿ ಶಾಸಕ ಹರೀಶ್‌ ಪೂಂಜ ಅವರ ಅನುದಾನದಲ್ಲಿ ನಿರ್ಮಾಣಗೊಂಡ ‘ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಕ್ರೀಡಾಂಗಣ’ವನ್ನು ಭಾನುವಾರ ನಿವೃತ್ತ ಶಿಕ್ಷಕ ಎಂ.ಕೆ. ಆರಿಗ ಗಾಳಿವನ ಉದ್ಘಾಟಿಸಿದರು.

ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಶ್ರೀ ಜೈನ್‌, ಉಪಾಧ್ಯಕ್ಷ ಯಶೋಧರ ಆಚಾರ್ಯ, ಹೊಸ್ಮಾರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ದಿವಾಕರ ಹೆಗ್ಡೆ ಮಯೂರ, ನಿವೃತ್ತ ಶಿಕ್ಷಕ ಅಣ್ಣಪ್ಪ ಹೆಗ್ಡೆ, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಶುಭರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ್ ಸಾಲಿಯಾನ್‌, ಅಶೋಕ ಪೂಜಾರಿ, ಸುನಂದಾ, ಯಶೋದಾ, ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಸಂಘಟನೆಯ ಗೌರವಾಧ್ಯಕ್ಷ ಯಶೋಧರ ಬಂಗೇರ, ಅಧ್ಯಕ್ಷ ರಾಘವ ಬಂಗೇರ ಇದ್ದರು.

ಕ್ರೀಡಾಂಗಣ ಉದ್ಘಾಟನೆಯ ಪ್ರಯುಕ್ತ ಕ್ರಿಕೆಟ್‌ ಟೂರ್ನಿ ಮತ್ತು ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಕ್ರಿಕೆಟ್‌ ಟೂರ್ನಿಯಲ್ಲಿ ಮರೋಡಿ ರಾಮ್‌ಪ್ರಸಾದ್‌ ಗೆಳೆಯರ ಬಳಗ ಪ್ರಥಮ, ಸಹರಾ ಫ್ರೆಂಡ್ಸ್‌ ನೆಲ್ಲಿಗುಡ್ಡೆ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟದಲ್ಲಿ ಉಮಾಮಹೇಶ್ವರ ಫ್ರೆಂಡ್ಸ್‌ ಪ್ರಥಮ, ಹಂಸ್ಸಾಬ್‌ ಮರೋಡಿ ದ್ವಿತೀಯ ಸ್ಥಾನ ಪಡೆಯಿತು.

ಸಮಾರೋಪ ಸಮಾರಂಭದಲ್ಲಿ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌, ಗ್ರಾಮ ಪಂಚಾಯಿತಿ ಸದಸ್ಯ ರತ್ನಾಕರ ಬುಣ್ಣಾನ್‌ ಮತ್ತಿತರರು ಭಾಗವಹಿಸಿದ್ದರು.

Related posts

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!