July 23, 2026
ತಾಲೂಕು ಸುದ್ದಿ

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

ಪ್ರಾಣಾಪಾಯದಿಂದ ಪಾರಾದ ಆಶೋಕ್

ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಖ್ಯಾತರಾದ
ಹಾವುಗಳ ಸಂ ರಕ್ಷಕರಾದ ಸ್ನೇಕ ಅಶೋಕ್ ಲಾಯಿಲ ಇವರು ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಇಂದು ಮನೆಯೊಂದರಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ಬಂದಿತ್ತು ಇದರ ರಕ್ಷಣೆಗೆ ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ ಎನ್ನಲಾಗುತ್ತಿದೆ.

ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Related posts

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya
error: Content is protected !!