23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

ಸವಣಾಲು : ಶ್ರೀ ಭೈರವ ಮೂಜಿಲ್ನಾಯ ಪುರುಷಾಯ ದೇವಸ್ಥಾನದ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳು ಆಗಮನವಾಗಿದೆ.

ಸವಣಾಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಭೈರವ ಕಲ್ಲು ಕ್ಷೇತ್ರದಲ್ಲಿ ಜೀಣೋ೯ದ್ಧಾರಗೊಳ್ಳುತ್ತಿರುವ ಶ್ರೀ ಭೈರವ, ಮೂಜಿಲ್ನಾಯ, ಪುರುಷಾಯ ದೈವಗಳ ನೂತನ ಶಿಲಾಮಯ ದೈಸ್ಥಾನದ ಶಿಲೆಗಳನ್ನು ಕಾಕ೯ಳದಿಂದ ಮಾ.26ರಂದು ಬೆಳಿಗ್ಗೆ ಅಳದಂಗಡಿ ಮುಖ್ಯ ರಸ್ತೆ ಮೂಲಕ ‌ ಸವಣಾಲು ಗ್ರಾಮದ ಗಡಿಭಾಗದಿಂದ ಭೈರವ ಕ್ಷೇತ್ರಕ್ಕೆ ವಿಜೃಂಭಣೆಯಿಂದ ಮೆರವಣಿಗೆ ಮೂಲಕ ಬರಮಾಡಿ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಎಲ್ಲಾ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೈವಗಳ ಕೃಪೆಗೆ ಪಾತ್ರರಾದರು.ನಂತರ ಮೇ. 22, 23, 24 ರಂದು ಕ್ಷೇತ್ರದಲ್ಲಿ ನಡೆಯುವ ಪ್ರತಿಷ್ಠಾ ಕಲಶೋತ್ಸವದ ಸಮಾಲೋಚನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಪ್ರತಿಷ್ಠಾ ಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಬಾಲಕೃಷ್ಣ ವಿ. ಶೆಟ್ಟಿ ಸಾಲಿಗ್ರಾಮ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ರೂಪು ರೇಷೆಗಳನ್ನು ವಿವರಿಸಿ, ಎಲ್ಲಾ ಭಕ್ತರ ಸಹಕಾರವನ್ನು ಕೋರಿ, ಸ್ವಾಗತಿಸಿದರು.

ಸಭೆಯಲ್ಲಿ ಉಪ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಸಮಿತಿ ಪ್ರಮುಖರಾದ ರಾಮಣ್ಣ ಎಂ.ಕೆ‌ ಜಾಲಡೆ , ಪರಮೇಶ್ವರ್ ಎಂ.ಕೆ ಜಾಲಡೆ, ಚಿನ್ನಯ ಎಂ.ಕೆ, ಕೃಷ್ಣಪ್ಪ ಗೌಡ ‌ದೇವಸ, ಲ|‌ರಘರಾಮ‌ ಗಾಂಭಿರ್ , ವಿಷ್ಟು ಮೂತಿ೯ ಭಟ್, ಪ್ರಭಾಕರ ಆಚಾರ್ಯ, ಲೋಕನಾಥ್ ಶೆಟ್ಟಿ, ಜಾರಪ್ಪ ಎಂ.ಕೆ, ಕೃಷ್ಣಪ್ಪ ಎಂ.ಕೆ, ಬಾಡಡ್ಕ, ವಸಂತ ಪೇಲಿ , ನಾರಾಯಣ ಆಚಾರ್ಯ , ರಾಮಚಂದ್ರ ಭಟ್ ದೆಂತಾಜೆ, ಸಂತೋಷ ಗೌಡ, ಉದಯ ಕುಮಾರ್, ಗೋಪಾಲ ಗೌಡ, ವಸಂತ ಮತ್ತೀತರರು ಉಪಸ್ಥಿತರಿದ್ದರು.ಗಣೇಶ್ ಭಂಡಾರಿ ನಡ್ತಿಕಲ್ಲು ಕಾಯ೯ಕ್ರಮ ನಿರೂಪಿಸಿ, ಧನ್ಯವಾದ ವಿತ್ತರು.

Related posts

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya
error: Content is protected !!