22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya
error: Content is protected !!