27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ವಿರುದ್ಧ ಹಾಗೂ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ , ಕಳಪೆ ಮಟ್ಟದ ಕಾಮಗಾರಿಗಳನ್ನು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಕಳೆದ 28 ಘಂಟೆಗಳಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ನಡೆಯುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಶೇಖರ್ ಲಾಯಿಲ ಮಂಗಳವಾರ ಮಧ್ಯಾಹ್ನ ಕೊನೆಗೊಳಿಸಿದರು.

ಕಳೆದ ಮಾರ್ಚ್ 20 ರಿಂದ ನಿರಂತರವಾಗಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಅಧಿಕಾರಿಗಳು ಸ್ಪಂದಿಸದ ಕಾರಣ ಮಾರ್ಚ್ 27 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ ಸಿಪಿಐ(ಎಂ) ಮುಖಂಡ ಶೇಖರ್ ಲಾಯಿಲ ಸೋಮವಾರ ರಾತ್ರಿಯೂ ಮುಂದುವರಿಸಿದರು. ಮಂಗಳವಾರ ಮಧ್ಯಾಹ್ನ ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್ ಅವರು ಶೇಖರ್ ಲಾಯಿಲ ಅವರೊಂದಿಗೆ ಮಾತುಕತೆ ನಡೆಸಿದರಲ್ಲದೆ ಲಿಖಿತ ರೂಪದಲ್ಲಿ ಹೋರಾಟಕ್ಕೆ ಸ್ಪಂದಿಸಿದ ನಂತರ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರು.

ಬೆಳ್ತಂಗಡಿ ತಾಲೂಕಿನಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಅಕ್ರಮ ಮರಳುಗಾರಿಕೆಯನ್ನು ಗ್ರಾಮಕರಣೀಕರು ಸೇರಿದಂತೆ ಕಂದಾಯ ನಿರೀಕ್ಷಕರು ಧಾಳಿ ನಡೆಸಿ ಸಂಬಂಧಪಟ್ಟ ಪೋಲಿಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಿಸುವ ಬಗ್ಗೆ ಲಿಖಿತ ಬರವಸೆ ನೀಡಿದರು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ , ಕಳಪೆ ಮಟ್ಟದ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ

ಅನುಷ್ಠಾನಾಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು ಸರ್ಕಾರಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮನವಿ ಸಲ್ಲಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಅಕ್ರಮಗಳ ಮಾಹಿತಿಯನ್ನು ಶೇಖರ್ ಲಾಯಿಲ ನೀಡಿದರು. ಅಕ್ರಮಗಳನ್ನು ತಡೆಯಲು ವಿಫಲವಾದರೆ ಮತ್ತೊಮ್ಮೆ ಅಮರಣಾಂತ ಉಪವಾಸ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಆಡಳಿತವನ್ನು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!