25.4 C
ಪುತ್ತೂರು, ಬೆಳ್ತಂಗಡಿ
April 9, 2025
ಪ್ರಮುಖ ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!