September 6, 2026
ಪ್ರಮುಖ ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya
error: Content is protected !!