25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2022-23ನೇ ಸಾಲಿನ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಬೇಸಿಗೆ ಶಿಬಿರದ ಉದ್ಘಾಟನೆ ಯನ್ನು ಸದಾನಂದ ಮುಂಡಾಜೆ ಯವರು ನೆರವೇರಿಸಿ ದರು.
ಬೇಸಿಗೆ ಶಿಬಿರದ ಮೊದಲ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಸುನಿಲ್ ಧರ್ಮಸ್ಥಳ ಆಗಮಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ರವರು ವಹಿಸಿದರು.
ಕಾರ್ಯಕ್ರಮವನ್ನು ಉದ್ಘಾಟನೆ ಗೊಳಿಸಿ ಮಾತನಾಡಿದ ಸದಾನಂದ ರವರು ಇಂತಹ ಬೇಸಿಗೆ ಶಿಬಿರದ ಸಧ್ಬಳಕೆಯನ್ನು ಯನ್ನು ವಿದ್ಯಾರ್ಥಿಗಳು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮ ನಿತ್ಯ ಜೀವನದಲ್ಲಿ ಬಳಕೆ ಮಾಡಿಕೊಳ್ಳಬೇಕಾಗಿ ತಿಳಿಸಿದರು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡ ಈ ವರ್ಷ ನಮಗೆ ಮಾತೃ ಶ್ರೀ ಹೇಮಾವತಿ ಅಮ್ಮ ನವರ ಮಾರ್ಗದರ್ಶನ ದಲ್ಲಿ ಉತ್ತಮ ಮಾರ್ಗದರ್ಶಕರು ಸಿಕ್ಕಿದ್ದಾರೆ ಇದರ ಬಳಕೆ ಯನ್ನು ಮಾಡಿಕೊಂಡು ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಕಾರ್ಯ ರೂಪಕ್ಕೆ ತರಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸದಾನಂದ ರವರು ತಾವೇ ರಚಿಸಿರುವ ಜಲ್ಲಿ ಕಲ್ಲುಗಳು ಎಂಬ ಪುಸ್ತಕ ಶಾಲೆಯ ಗ್ರಂಥಾಲಯಕ್ಕೆ ನೀಡಿದರು.ಶಾಲೆಯ ಹಿರಿಯ ಶಿಕ್ಷಕರಾದ ಜೋಸೆಫ್ ಪಿ.ಎಂ ರವರು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ಸುನೀಲ್ ರವರು ರಂಗ ಗೀತೆ, ಜಾಗೃತಿ ಗೀತೆ, ಜಾನಪದ ಗೀತೆ, ನಾಟಕಭಿನಯ ದ ಬಗ್ಗೆ ಮಕ್ಕಳಿಗೆ ಉತ್ತಮ ರೀತಿಯಲ್ಲಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ನಿಶಾಂತ್ ಸ್ವಾಗತಿಸಿ, ಶ್ರೀಮತಿ ಶೀಲಾ ಧನ್ಯವಾದಗೈದ ಕಾರ್ಯಕ್ರಮವನ್ನು ಶ್ರೀಮತಿ ಸುಜಾತಾ ಬಿ ರವರು ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!