25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya
error: Content is protected !!