24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿ

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

ಬೆಳ್ತಂಗಡಿ: 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ ಸಮಾರಂಭವು ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆದು ಮುಂಡಾಜೆ ಶಾಲೆಯ ಮೂರು ಮಂದಿ ವಿದ್ಯಾರ್ಥಿಗಳು ಪ್ರಶಸ್ತಿಯ ಗೌರವಪತ್ರ ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಾದ ಸಂಮೃದ್ದಿ, ಆಶಿಫಾ ಎ.ಆರ್ ಮತ್ತು ಚಿನ್ಮಯಿ ಇವರೇ ಜಿಲ್ಲಾಧಿಕಾರಿಯಿಂದ ಪ್ರಶಸ್ತಿ ಸ್ವೀಕರಿಸಿದವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿಗಳೂ ಆದ ರವಿಕುಮಾರ್ (ಐ ಎ ಎಸ್), ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ (ಐ ಎ ಎಸ್), ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ ಮೋಹನ್ ಆಳ್ವ, ಮಾಜಿ ಸಚಿವರು ಹಾಗೂ ಸ್ಕೌಟ್ ಮಾಜಿ ಆಯುಕ್ತ ನಾಗರಾಜ್ ಶೆಟ್ಟಿ, ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಹಾಗೂ ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಎಂ ಜಿ ಕಜೆ, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್, ರಾಜ್ಯ ಸ್ಕೌಟ್ ಪ್ರತಿನಿಧಿ ತ್ಯಾಗo ಹರೇಕಳ, ಜಿಲ್ಲಾ ಸ್ಕೌಟ್ ಸಂಘಟನಾ ಶಿಕ್ಷಕ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಗೈಡ್ ಸಂಘಟನಾ ಶಿಕ್ಷಕಿ ಫ್ಲೇವಿ ಡಿ ಸೋಜ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ, ಜಿಲ್ಲಾ ಸಹಾಯಕ ಆಯುಕ್ತರು, ಸ್ಥಳೀಯ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶತಮಾನೋತ್ಸವ ಆಚರಿಸಿರುವ ಮುಂಡಾಜೆ ಶಾಲೆಯ ಕಬ್ಸ್ ಬುಲ್ ಬುಲ್ಸ್ ಘಟಕದ ಫ್ಲಾಕ್ ಲೀಡರ್ ಸೇವಂತಿ ನಿರಂಜನ ಅವರು ಸದ್ರಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ. ಶಾಲಾ ಎಸ್‌ಡಿಎಂಸಿ ಹಾಗೂ ಅಧ್ಯಾಪಕವೃಂದ ಪೂರಕ ಸಹಕಾರ ನೀಡಿರುತ್ತಾರೆ.

Related posts

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ ಚಾರ್ಮಾಡಿ ವಲಯದಿಂದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಮತ್ತು ನೃತ್ಯ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!