September 6, 2026
ಕ್ರೀಡಾ ಸುದ್ದಿ

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

ಬೆಳ್ತಂಗಡಿ: 2021-22 ನೇ ಸಾಲಿನ ತೃತೀಯ ಚರಣ ಕಬ್, ಸುವರ್ಣ ಗರಿ ಬುಲ್ ಬುಲ್, ತೃತೀಯ ಸೋಪಾನ ಸ್ಕೌಟ್ಸ್ ಮತ್ತು ಗೈಡ್ಸ್, ನಿಪುನ್ರೋವರ್ಸ್ ಮತ್ತು ರೇಂಜರ್ಸ್ ಪ್ರಶಸ್ತಿ ಪತ್ರ ಪ್ರಧಾನ ಸಮಾರಂಭವು ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಡೆದು ಮುಂಡಾಜೆ ಶಾಲೆಯ ಮೂರು ಮಂದಿ ವಿದ್ಯಾರ್ಥಿಗಳು ಪ್ರಶಸ್ತಿಯ ಗೌರವಪತ್ರ ಸ್ವೀಕರಿಸಿದ್ದಾರೆ.

ವಿದ್ಯಾರ್ಥಿಗಳಾದ ಸಂಮೃದ್ದಿ, ಆಶಿಫಾ ಎ.ಆರ್ ಮತ್ತು ಚಿನ್ಮಯಿ ಇವರೇ ಜಿಲ್ಲಾಧಿಕಾರಿಯಿಂದ ಪ್ರಶಸ್ತಿ ಸ್ವೀಕರಿಸಿದವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿಗಳೂ ಆದ ರವಿಕುಮಾರ್ (ಐ ಎ ಎಸ್), ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ (ಐ ಎ ಎಸ್), ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ ಮೋಹನ್ ಆಳ್ವ, ಮಾಜಿ ಸಚಿವರು ಹಾಗೂ ಸ್ಕೌಟ್ ಮಾಜಿ ಆಯುಕ್ತ ನಾಗರಾಜ್ ಶೆಟ್ಟಿ, ಜಿಲ್ಲಾ ಗೈಡ್ ಆಯುಕ್ತೆ (ಪ್ರಭಾರ) ಹಾಗೂ ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ಜಿಲ್ಲಾ ಕಾರ್ಯದರ್ಶಿ ಎಂ ಜಿ ಕಜೆ, ಜಿಲ್ಲಾ ಕೋಶಾಧಿಕಾರಿ ಅನಿಲ್ ಕುಮಾರ್, ರಾಜ್ಯ ಸ್ಕೌಟ್ ಪ್ರತಿನಿಧಿ ತ್ಯಾಗo ಹರೇಕಳ, ಜಿಲ್ಲಾ ಸ್ಕೌಟ್ ಸಂಘಟನಾ ಶಿಕ್ಷಕ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಗೈಡ್ ಸಂಘಟನಾ ಶಿಕ್ಷಕಿ ಫ್ಲೇವಿ ಡಿ ಸೋಜ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ, ಜಿಲ್ಲಾ ಸಹಾಯಕ ಆಯುಕ್ತರು, ಸ್ಥಳೀಯ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶತಮಾನೋತ್ಸವ ಆಚರಿಸಿರುವ ಮುಂಡಾಜೆ ಶಾಲೆಯ ಕಬ್ಸ್ ಬುಲ್ ಬುಲ್ಸ್ ಘಟಕದ ಫ್ಲಾಕ್ ಲೀಡರ್ ಸೇವಂತಿ ನಿರಂಜನ ಅವರು ಸದ್ರಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ. ಶಾಲಾ ಎಸ್‌ಡಿಎಂಸಿ ಹಾಗೂ ಅಧ್ಯಾಪಕವೃಂದ ಪೂರಕ ಸಹಕಾರ ನೀಡಿರುತ್ತಾರೆ.

Related posts

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿಗಳಾದ ಸಂಜ್ಞಾ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
error: Content is protected !!