25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!