24.4 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.28ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷೆ ವೇದಾವತಿ ಜನಾರ್ದನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..

ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್, ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ 37 ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.

ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು.

ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!