23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.28ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷೆ ವೇದಾವತಿ ಜನಾರ್ದನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..

ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್, ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ 37 ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.

ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು.

ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya
error: Content is protected !!