September 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರು

Suddi Udaya
error: Content is protected !!