July 23, 2026
Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.28ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷೆ ವೇದಾವತಿ ಜನಾರ್ದನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..

ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್, ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ 37 ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.

ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು.

ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಮುಹಮ್ಮದ್ ಹುಝೈರ್ ಕುಮಿಟೆಯಲ್ಲಿ ಪ್ರಥಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
error: Content is protected !!