30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!