23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!