Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.28ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷೆ ವೇದಾವತಿ ಜನಾರ್ದನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..

ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್, ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ 37 ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.

ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು.

ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!