25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya
error: Content is protected !!