23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya
error: Content is protected !!