23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ಸಮಾಪ್ತವಾಗುತ್ತದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.
‌ ಬೆಳ್ತಂಗಡಿ ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮಚಂದ್ರನ ಪ್ರತಿಮೆ ನಿರ್ಮಿಸಲು ಆಯ್ದ ಶಿಲೆಗಳನ್ನು ತಂದದ್ದಾಗಿದೆ, ಇವುಗಳಲ್ಲಿ ಶಿಲ್ಪಗಾರರು ಪ್ರತಿಮಾ ನಿರ್ಮಾಣಕ್ಕೆ ಅತ್ಯುತ್ತಮವಾದದು ಯಾವುದನ್ನು ಆಯ್ಕೆ ಮಾಡಿ ಪ್ರತಿಷ್ಠೆ ಮಾಡಲಾಗುತ್ತದೆ.


ಈಗಾಗಲೆ ರಾಮ ಮಂದಿರ ನಿರ್ಮಾಣಕ್ಕಾಗಿ ಮನೆ ಮನೆಗಳಿಂದ ಸಂಗ್ರಹಿಸಿರುವ, ಗ್ರಾಮ ಗ್ರಾಮಗಳಿಂದ ಸಂಗ್ರಹಿಸಿರುವ ಮಣ್ಣನ್ನು ರಾಮಮಂದಿರದ ತಳಪಾಯಕ್ಕೆ ಬಳಸಲಾಗಿದೆ. ಮುಂದಿನ ವರ್ಷ ಪ್ರಾಣ ಪ್ರತಿಷ್ಠಾ ಕಾಲದಲ್ಲಿ, ಬ್ರಹ್ಮಕಲಶೋತ್ಸವದಲ್ಲಿ ನಾಡಿನಾದ್ಯಂತ ‘ಭಕ್ತರು ಬರುವ ನಿರೀಕ್ಷೆಯಿದೆ. ‘ಭಕ್ತರಿಗೆ ಪ್ರಾಥಮಿಕ ಸೌಲ‘ಭ್ಯಗಳನ್ನು ನೀಡಲು 25 ಸಾವಿರ ಮಂದಿಗೆ ಅನುಕೂಲವಾಗುವಂತೆ ಅಗತ್ಯತೆ ಪೂರೈಸಲು ಟ್ರಸ್ಟ್ ಸಿದ್ಧತೆ ಕೈಗೊಂಡಿದೆ. ಒಮ್ಮೆ ಆಯೋಧ್ಯೆ‘ಗೆ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣವಾಗಬೇಕು ಎಂಬ ಆಶಯವಿದೆ ಎಂದರು.
ರಾಮಮಂದಿರ ಶತಶತಮಾನದ ಪೀಳಿಗೆಗೆ ಲಭಿಸುವ ಸಲುವಾಗಿ ಭವ್ಯ ಮಂದಿರ ಸ್ಥಾಪನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಮಂದಿರದ ಕನಸ್ಸು ನನಸಾಗುತ್ತಿದೆ, ಅದೇ ರೀತಿ ಪ್ರತಿ ಮನೆಯಲ್ಲಿ ಮಕ್ಕಳಿಗೆ ಸನಾತನ ‘ಧರ್ಮದ ಶಿಕ್ಷಣ ನೀಡಬೇಕು. ಎಲ್ಲರಿಗೂ ಶ್ರೀರಾಮನ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya
error: Content is protected !!