25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!