September 6, 2026
Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.೨೮ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷರಾದ
ಶ್ರೀಮತಿ ವೇದಾವತಿ ಜನಾರ್ದನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರ್ಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..
ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್,
ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಭೆಯಲ್ಲಿ ೩೭ ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು
ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.
ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!