23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಾ.27ರಿಂದ ನಾಲ್ಕು ದಿನಗಳ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟಕರಾಗಿ ಮಕ್ಕಳ ಹಕ್ಕುಗಳ ಸಮನ್ವಯ ಅಧಿಕಾರಿಯಾದ ವಿನೋದ್ ಕಲ್ಲಾಜೆ ಆಗಮಿಸಿದ್ದರು.


ಮುಖ್ಯ ಅಭ್ಯಂಗತರಾಗಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಲಾ ಶಿಕ್ಷಕರಾದ ಸುಂದರ್ ನಾಯ್ಕ್ , ಶ್ರೀಮತಿ ಪೈ ಹಾಗೂ ರಜನಿ ಕಾಮತ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು..
ವಿದ್ಯಾರ್ಥಿಗಳಿಗೆ ಅಜ್ಜಿ ಕಥೆ ,ಬಾಲಗೀತೆ ,ಕ್ರಾಫ್ಟ್ ವರ್ಕ್, ಗಳು ಬೆಂಕಿ ರಹಿತ ಆಹಾರ ಪದಾರ್ಥಗಳು, ಮೆಹಂದಿ, ಹೇರ್ ಸ್ಟೈಲ್, ಫೇಶಿಯಲ್, ಎಂಬ್ರಾಯಿಡರ್ ವಕ್೯, ಕಸೂತಿ, ವಿದ್ಯುತ್ ಉಪಕರಣಗಳ ಬಳಕೆ ಮತ್ತು ಜಾಗ್ರತಿ, ನಾಯಕತ್ವದ ಬಗ್ಗೆ ಅರಿವು, ಇತ್ಯಾದಿಗಳ ಬಗ್ಗೆ ತರಬೇತಿ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ಸ್ಮೀತೇಶ್ ಬಾರ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಬೇಸಿಗೆ ಶಿಬಿರದಲ್ಲಿ ನಡೆದಂತಹ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಮುಂದಿನ ಜೀವನ ಶೈಲಿಯಲ್ಲಿ ಏಕಾಗ್ರತೆ ,ಶಿಸ್ತು , ತಾಳ್ಮೆ ಆಲಿಸುವಿಕೆ ಯಾವ ರೀತಿ ಬೆಳೆಸಬೇಕು ಗುರು ಹಿರಿಯರನ್ನು ಹೇಗೆ ಸ್ಮರಿಸಬೇಕು ಎಂಬುದನ್ನು ಮಕ್ಕಳಿಗೆ ತಿಳಿಸಿದರು.
ಸಮಾರೋಪದ ಉಪಸ್ಥಿತಿಯಲ್ಲಿ ಸಹನ ಜೈನ್ ಹರ್ಬಲ್ ಬ್ಯೂಟಿಷಿಯನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕುಮಾರಿ ಅನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ , ವಿದ್ಯಾರ್ಥಿಯ ಯಶ್ವಿತ ಸ್ವಾಗತಿಸಿ ,ವಿದ್ಯಾರ್ಥಿ ಕುಮಾರಿ ಪ್ರಾಪ್ತಿ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!