25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya
error: Content is protected !!