25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
error: Content is protected !!