July 23, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!