23.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿರಾಜ್ಯ ಸುದ್ದಿ

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

ಬೆಳ್ತಂಗಡಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಮತ್ತೆ ಬಂದಿದೆ. ರಾಜ್ಯದಲ್ಲಿ ಚುನಾವಣೆಯ ಬಿಸಿ ಏರಿರುವ ನಡುವೆ ದೇಶದ ಕ್ರಿಕೆಟ್ ಪ್ರೇಮಿಗಳಲ್ಲಿ ಐಪಿಎಲ್ ಕುತೂಹಲ ಗರಿಗೆದರಿದೆ

. ರಾಜಕಾರಣಿಗಳ ಮತಬೇಟೆ, ಮತದಾರರ ಹಕ್ಕು ಚಲಾವಣೆಯ ನಡುವೆ,ಕ್ರಿಕೆಟಿಗರ ವಿಕೆಟ್ ಬೇಟೆ, ರನ್ ದಾಹ, ಸಿಕ್ಸರ್- ಬೌಂಡರಿಗಳ ಸಿರಿಮಳೆ ಸಾಗಲಿದೆ. ಕರೋನಾ ಭೀತಿಯನ್ನೆಲ್ಲ ನಿವಾರಿಸಿಕೊಂಡು ಐಪಿಎಲ್ ತನ್ನ 16ನೇ ಆವೃತ್ತಿಯಲ್ಲಿ ಮತ್ತೆ ಹಿಂದಿನ ಸ್ವರೂಪ, ಸಂಭ್ರಮ, ಶ್ರೀಮಂತಿಕೆಯಲ್ಲೇ ಮರಳುತ್ತಿದೆ. ಟೂರ್ನಿಯಲ್ಲಿ ಆಡುವ ಎಲ್ಲ 10 ತಂಡಗಳು ಮತ್ತೆ ತಮ್ಮ ತವರು ತಾಣಗಳಲ್ಲೇ ಲೀಗ್ ಪಂದ್ಯಗಳನ್ನು ಆಡುವ ಅವಕಾಶ ಪಡೆದುಕೊಂಡಿವೆ. ಪ್ರೇಕ್ಷಕರೂ ಮತ್ತೆ ಶೇಕಡ 100 ಪ್ರಮಾಣದಲ್ಲಿ ಕ್ರೀಡಾಂಗಣಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದಾರೆ. ಟಿವಿ ಜತೆಗೆ ಓಟಿಟಿ ವೇದಿಕೆಯಲ್ಲೂ ಐಪಿಎಲ್ ಮನರಂಜನೆ ಕ್ರಿಕೆಟ್ ಪ್ರೇಮಿಗಳ ಮನೆ- ಮೊಬೈಲ್ ತಲುಪಲಿದೆ. ಕಳೆದ ಆವೃತ್ತಿಯಲ್ಲಿ ಎರಡು ಹೊಸ ತಂಡಗಳು ಸೇರಿರುವುದರಿಂದ ಐಪಿಎಲ್ ಕುಟುಂಬವೂ ದೊಡ್ಡದಾಗಿದೆ.
ತಂಡಗಳು:
ಮುಂಬೈ ಇಂಡಿಯನ್ಸ್, ಕೋಲ್ಕತ ನೈಟ್’ರೈಡರ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಆರ್ ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜೈಂಟ್ಸ್ , ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟಾನ್ಸ್ , ಸನ್’ರೈಸರ್ಸ್ ಹೈದರಾಬಾದ್

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!